Back to Languages

    Kannada - Chapter 54

    Translation by Abdussalam Puthige

    Verse 1

    ಇನ್ನಾದರೂ, ನೀವು ಅಲ್ಲಾಹನಿಗೆ ಸಾಷ್ಟಾಂಗ ವಂದಿಸಿರಿ ಮತ್ತು ಅವನನ್ನೇ ಆರಾಧಿಸಿರಿ

    Verse 2

    (ಲೋಕಾಂತ್ಯದ) ಆ ಕ್ಷಣವು ಸಮೀಪಿಸಿತು ಮತ್ತು ಚಂದ್ರವು ಸೀಳಿಹೋಯಿತು

    Verse 3

    ಅವರು ಯಾವುದಾದರೂ ಪುರಾವೆಯನ್ನು ಕಂಡಾಗ ಮುಖ ತಿರುಗಿಸಿಕೊಳ್ಳುತ್ತಾರೆ ಮತ್ತು ಇದು ತೀರ ತಾತ್ಕಾಲಿಕ ಜಾದೂಗಾರಿಕೆ ಎನ್ನುತ್ತಾರೆ

    Verse 4

    ಅವರು (ಸತ್ಯವನ್ನು) ತಿರಸ್ಕರಿಸಿದರು ಮತ್ತು ಸ್ವೇಚ್ಛೆಯನ್ನು ಅನುಸರಿಸಿದರು. ನಿಜವಾಗಿ, ಎಲ್ಲ ವಿಷಯಗಳಿಗೂ ಒಂದು ಕಾಲ ನಿಶ್ಚಿತವಾಗಿರುತ್ತದೆ

    Verse 5

    ಖಂಡಿತ, ಪಾಠದಾಯಕ ಮಾಹಿತಿಗಳು ಅವರ ಬಳಿಗೆ ಬಂದಿವೆ

    Verse 6

    ಪರಿಪೂರ್ಣ ಜಾಣ್ಮೆಯ (ಉಪದೇಶವು ತಲುಪಿದೆ). ಆದರೆ ಎಚ್ಚರಿಸುವವರಿಂದ ಅವರಿಗೇನೂ ಲಾಭವಾಗಿಲ್ಲ

    Verse 7

    (ದೂತರೇ,) ನೀವು ಅವರನ್ನು ಕಡೆಗಣಿಸಿಬಿಡಿರಿ. (ಶೀಘ್ರದಲ್ಲೇ) ಕರೆಯುವವನೊಬ್ಬನು ತೀರಾ ಅಪ್ರಿಯವಾದುದರ ಕಡೆಗೆ (ಅವರನ್ನು) ಕರೆಯುವನು

    Verse 8

    ಆಗ ಅವರ ದೃಷ್ಟಿಗಳು ತಗ್ಗಿರುವವು. ಅವರು ಚದುರಿದ ಮಿಡತೆಗಳೋ ಎಂಬಂತೆ ಗೋರಿಗಳಿಂದ ಎದ್ದು ಬರುವರು

    Verse 9

    ಕೂಗುವಾತನೆಡೆಗೆ ಅವರು ಧಾವಿಸುತ್ತಿರುವರು. ಅಂದು ಧಿಕ್ಕಾರಿಯು ಹೇಳುವನು; ಇದು ತುಂಬಾ ಕಠಿಣ ದಿನ

    Verse 10

    ಅವರಿಗಿಂತ ಹಿಂದೆ ನೂಹ್‌ರ ಜನಾಂಗವು (ಸತ್ಯವನ್ನು) ತಿರಸ್ಕರಿಸಿತ್ತು. ಅವರು, ನಮ್ಮ ದಾಸರನ್ನು ತಿರಸ್ಕರಿಸಿದ್ದರು ಮತ್ತು ಅವರನ್ನು ಹುಚ್ಚನೆಂದು ಕರೆದರು ಹಾಗೂ ಅವರಿಗೆ ಬೆದರಿಕೆ ಒಡ್ಡಿದರು

    Verse 11

    ಕೊನೆಗೆ ಅವರು (ನೂಹರು), ನಾನಿದೋ ಸೋತು ಹೋಗಿದ್ದೇನೆ. ಇದೀಗ ನೀನೇ ಪ್ರತೀಕಾರ ತೀರಿಸು ಎಂದು ತಮ್ಮ ಒಡೆಯನಿಗೆ ಮೊರೆ ಇಟ್ಟರು

    Verse 12

    ನಾವು, ಧಾರಾಳವಾಗಿ ಸುರಿಯುವ ಮಳೆಯ ಮೂಲಕ ಆಕಾಶದ ಬಾಗಿಲುಗಳನ್ನು ತೆರೆದುಬಿಟ್ಟೆವು

    Verse 13

    ಮತ್ತು ನಾವು ಭೂಮಿಯಿಂದ ಚಿಲುಮೆಗಳನ್ನು ಹರಿಸಿಬಿಟ್ಟೆವು. ಕೊನೆಗೆ, ಮೊದಲೇ ನಿರ್ಧಾರವಾಗಿದ್ದ ಒಂದು ಕಾರ್ಯಕ್ಕಾಗಿ ನೀರು ಸಂಗ್ರಹವಾಯಿತು

    Verse 14

    ಮತ್ತು ನಾವು ಅವರನ್ನು (ನೂಹರನ್ನು), ಹಲಗೆಗಳು ಹಾಗೂ ಮೊಳೆಗಳಿದ್ದ ವಸ್ತುವಿಗೆ (ಹಡಗಿಗೆ) ಹತ್ತಿಸಿದೆವು

    Verse 15

    ಅದು ನಮ್ಮ ಕಣ್ಣ ಮುಂದೆಯೇ (ನಮ್ಮ ಕಾವಲಿನಲ್ಲಿ) ಚಲಿಸುತ್ತಿತ್ತು. (ಹೀಗಿತ್ತು) ಧಿಕ್ಕರಿಸಲ್ಪಟ್ಟವನ ಪರವಾಗಿ ತೀರಿಸಲಾದ ಪ್ರತೀಕಾರ

    Verse 16

    ಮತ್ತು ನಾವು ಅದನ್ನು ಒಂದು ಪುರಾವೆಯಾಗಿ ಉಳಿಸಿದೆವು. ಪಾಠ ಕಲಿಯುವವರು ಯಾರಾದರೂ ಇದ್ದಾರೆಯೇ

    Verse 17

    (ನೋಡಿರಿ,) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ

    Verse 18

    ನಾವು ಉಪದೇಶಕ್ಕಾಗಿ ಕುರ್‌ಆನನ್ನು ಸರಳಗೊಳಿಸಿರುವೆವು. ಯಾರಾದರೂ ಇದ್ದಾರೆಯೇ, ಉಪದೇಶ ಸ್ವೀಕರಿಸುವವರು

    Verse 19

    ಆದ್ ಜನಾಂಗದವರೂ (ಸತ್ಯವನ್ನು) ತಿರಸ್ಕರಿಸಿದ್ದರು. (ಅವರ ವಿಷಯದಲ್ಲೂ) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ

    Verse 20

    ಒಂದು ಅಶುಭ ದಿನದಂದು, ನಾವು ಅವರ ವಿರುದ್ಧ ಪ್ರಚಂಡ ಬಿರುಗಾಳಿಯನ್ನು ಕಳಿಸಿದೆವು. ಅದು ಬೀಸುತ್ತಲೇ ಇತ್ತು

    Verse 21

    ಅದು ಜನರನ್ನು, ಉರುಳಿ ಬಿದ್ದ ಖರ್ಜೂರ ಗಿಡದ ಬುಡಗಳೆಂಬಂತೆ ಕಿತ್ತೆಸೆಯುತ್ತಿತ್ತು

    Verse 22

    ಹೇಗಿತ್ತು, ನನ್ನ ಶಿಕ್ಷೆ ಹಾಗೂ ಎಚ್ಚರಿಕೆ

    Verse 23

    ಉಪದೇಶಕ್ಕಾಗಿ, ನಾವು ಕುರ್‌ಆನನ್ನು ಸರಳಗೊಳಿಸಿರುವೆವು. ಯಾರಾದರೂ ಇದ್ದಾರೆಯೇ, ಉಪದೇಶ ಸ್ವೀಕರಿಸುವವರು

    Verse 24

    ಸಮೂದ್ ಜನಾಂಗದವರು, ಎಚ್ಚರಿಸುವವರನ್ನು ತಿರಸ್ಕರಿಸಿದರು

    Verse 25

    ಅವರು ಹೇಳಿದರು; ನಾವೇನು, ನಮ್ಮೊಳಗಿನ ಒಬ್ಬ ಮಾನವನನ್ನು ಹಿಂಬಾಲಿಸಬೇಕೇ? ಹಾಗೆ ಮಾಡಿದರೆ ನಾವು ದಾರಿಗೆಟ್ಟವರು ಹಾಗೂ ಹುಚ್ಚರಾಗಿ ಬಿಡುವೆವು

    Verse 26

    ನಮ್ಮ ಪೈಕಿ ಅವನಿಗೆ ದಿವ್ಯ ಬೋಧನೆಯನ್ನು ಇಳಿಸಿಕೊಡಲಾಗಿದೆಯೇ? ಅವನಂತು ಸುಳ್ಳುಗಾರ ಹಾಗೂ ತನ್ನನ್ನೇ ಹೊಗಳುವವನಾಗಿದ್ದಾನೆ

    Verse 27

    ಸುಳ್ಳುಗಾರ ಮತ್ತು ತನ್ನನ್ನೇ ಹೊಗಳುವವನು ಯಾರೆಂಬುದು ಅವರಿಗೆ ನಾಳೆ ತಿಳಿಯಲಿದೆ

    Verse 28

    ನಾವು ಅವರ ಪಾಲಿಗೆ ಪರೀಕ್ಷೆಯಾಗಿ ಒಂದು ಹೆಣ್ಣೊಂಟೆಯನ್ನು ಕಳಿಸುವೆವು (ಸಾಲಿಹರೇ,) ನೀವು ಅವರನ್ನು ನೋಡುತ್ತಲಿರಿ ಹಾಗೂ ಸಹನಶೀಲರಾಗಿರಿ

    Verse 29

    ಮತ್ತು ನೀರನ್ನು ಅವರ ನಡುವೆ ಹಂಚಲಾಗಿದೆ. ಪ್ರತಿಯೊಬ್ಬರೂ ನೀರು ಕುಡಿಯುವ ತಮ್ಮ ಸರದಿಯ ವೇಳೆ ಹಾಜರಿರಬೇಕು ಎಂದು ಅವರಿಗೆ ತಿಳಿಸಿರಿ (ಎನ್ನಲಾಯಿತು)

    Verse 30

    ಅವರು (ಊರವರು) ತಮ್ಮ ಸಂಗಾತಿಯನ್ನು ಕರೆದರು. ಅವನು ಅತಿಕ್ರಮಕ್ಕಿಳಿದನು ಹಾಗೂ ಅವನು (ಒಂಟೆಯನ್ನು) ಕಡಿದು ಬಿಟ್ಟನು

    Verse 31

    ಕೊನೆಗೆ, ಹೇಗಿತ್ತು ನನ್ನ ಶಿಕ್ಷೆ ಮತ್ತು ನನ್ನ ಎಚ್ಚರಿಕೆ (ಎಂಬುದನ್ನು ನೋಡಿರಿ)

    Verse 32

    ನಾವು ಅವರ ಮೇಲೆ ಒಂದೇ ಒಂದು ಅಬ್ಬರದ ಸಿಡಿಲನ್ನು ಎರಗಿಸಿಬಿಟ್ಟೆವು. ಅಷ್ಟಕ್ಕೇ ಅವರು ಒಣ ಹುಲ್ಲಿನಂತಾಗಿ ಬಿಟ್ಟರು

    Verse 33

    ನಾವು ಉಪದೇಶಕ್ಕಾಗಿ ಕುರ್‌ಆನನ್ನು ಸರಳಗೊಳಿಸಿರುವೆವು. ಉಪದೇಶ ಸ್ವೀಕರಿಸುವವನು ಯಾರಾದರೂ ಇದ್ದಾನೆಯೇ

    Verse 34

    ಲೂತ್‌ರ ಜನಾಂಗದವರು, ಎಚ್ಚರಿಸುವವರನ್ನು ತಿರಸ್ಕರಿಸಿದರು

    Verse 35

    ನಾವು ಅವರ ಮೇಲೆ ಕಲ್ಲುಗಳನ್ನು ಸುರಿಸುವ ಬಿರುಗಾಳಿಯನ್ನು ಎರಗಿಸಿದೆವು – ಲೂತ್‌ರ ಮನೆಯವರ ಹೊರತು. ಅವರನ್ನು ನಾವು ಮುಂಜಾವಿನ ಸಮಯದಲ್ಲೇ ರಕ್ಷಿಸಿದೆವು

    Verse 36

    ಅದು ನಮ್ಮ ವತಿಯಿಂದ (ನೀಡಲಾದ) ಕೊಡುಗೆಯಾಗಿತ್ತು. ಕೃತಜ್ಞನಾದವನನ್ನು ನಾವು ಇದೇ ರೀತಿ ಪುರಸ್ಕರಿಸುತ್ತೇವೆ

    Verse 37

    ಅವರು (ಲೂತರು) ನಮ್ಮ ಶಿಕ್ಷೆಯ ಕುರಿತು ಅವರನ್ನು (ತಮ್ಮ ಜನಾಂಗದವರನ್ನು) ಎಚ್ಚರಿಸಿದ್ದರು. ಆದರೆ ಅವರು ಆ ಎಚ್ಚರಿಕೆಯ ಕುರಿತು ಜಗಳಾಡ ತೊಡಗಿದರು

    Verse 38

    ಮತ್ತು ಅವರು, ಅವರ (ಲೂತರ) ಅತಿಥಿಗಳನ್ನು ಅವರಿಂದ ಕಸಿದುಕೊಳ್ಳ ಬಯಸಿದರು. ಆಗ ನಾವು ಅವರ ಕಣ್ಣುಗಳನ್ನು ಅಳಿಸಿಬಿಟ್ಟೆವು – ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು

    Verse 39

    ಮುಂಜಾನೆಯೇ ಅವರ ಮೇಲೆ ಶಾಶ್ವತ ಶಿಕ್ಷೆಯೊಂದು ಎರಗಿಬಿಟ್ಟಿತು

    Verse 40

    ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು

    Verse 41

    ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳಗೊಳಿಸಿರುವೆವು. ಯಾರಾದರೂ ಇದ್ದಾನೆಯೇ, ಉಪದೇಶ ಸ್ವೀಕರಿಸುವವನು

    Verse 42

    ಮತ್ತು ಫಿರ್‌ಔನನ ಜನಾಂಗದವರ ಬಳಿಗೂ ಎಚ್ಚರಿಸುವವರು ಬಂದಿದ್ದರು

    Verse 43

    ಅವರು ನಮ್ಮ ಎಲ್ಲ ಪುರಾವೆಗಳನ್ನೂ ತಿರಸ್ಕರಿಸಿದರು. ಕೊನೆಗೆ ನಾವು ಅವರನ್ನು ಹಿಡಿದೆವು. ಅದು ಭಾರೀ ಪ್ರಬಲನೂ ಬಲಿಷ್ಠನೂ ಆಗಿರುವವನ ಹಿಡಿತವಾಗಿತ್ತು

    Verse 44

    ನಿಮ್ಮಲ್ಲಿನ ಧಿಕ್ಕಾರಿಗಳೇನು ಅವರಿಗಿಂತ ಉತ್ತಮರೇ? ಅಥವಾ (ಗತಕಾಲದ) ದಿವ್ಯ ಗ್ರಂಥಗಳಲ್ಲಿ ನಿಮಗೇನಾದರೂ ಕ್ಷಮಾ ಪತ್ರ ನೀಡಲಾಗಿದೆಯೇ

    Verse 45

    ನಾವು ಪ್ರತೀಕಾರ ತೀರಿಸಬಲ್ಲ (ಶಕ್ತಿಶಾಲಿ) ಪಡೆಯಾಗಿದ್ದೇವೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆಯೇ

    Verse 46

    ಬಹು ಬೇಗನೇ ಆ ಪಡೆ ಸೋತು ಹೋಗಲಿದೆ ಮತ್ತು ಅವರು ಬೆನ್ನು ತಿರುಗಿಸಿ ಓಡಲಿದ್ದಾರೆ

    Verse 47

    ಅವರಿಗೆ (ಪುನರುತ್ಥಾನದ) ಆ ಕ್ಷಣದ ವಾಗ್ದಾನ ಮಾಡಲಾಗಿದೆ ಮತ್ತು ಆ ಕ್ಷಣವು ತುಂಬಾ ಕಠಿಣ ಹಾಗೂ ಅಸಹನೀಯವಾಗಿರುವುದು

    Verse 48

    ಖಂಡಿತವಾಗಿಯೂ ಅಪರಾಧಿಗಳು ದಾರಿಗೆಟ್ಟಿದ್ದಾರೆ ಹಾಗೂ ಸಂಪೂರ್ಣ ಅಜ್ಞಾನದ ಸ್ಥಿತಿಯಲ್ಲಿದ್ದಾರೆ

    Verse 49

    ಅವರ ಮುಖಗಳನ್ನು ನೆಲಕ್ಕೆ ಒರಗಿಸಿ ಅವರನ್ನು ಎಳೆಯುತ್ತಾ ನರಕಕ್ಕೆ ಸಾಗಿಸಲಾಗುವ ದಿನ ‘‘ಸವಿಯಿರಿ ಬೆಂಕಿಯ ಉರಿಯನ್ನು’’ (ಎಂದು ಅವರೊಡನೆ ಹೇಳಲಾಗುವುದು)

    Verse 50

    ನಾವು ಪ್ರತಿಯೊಂದು ವಸ್ತುವನ್ನೂ ನಿರ್ದಿಷ್ಟ ಪ್ರಮಾಣದಲ್ಲಿ ಸೃಷ್ಟಿಸಿರುವೆವು

    Verse 51

    ಮತ್ತು ನಮ್ಮ ಆದೇಶವು ಕಣ್ಮುಚ್ಚಿ ತೆರೆಯುವಷ್ಟು ಕ್ಷಿಪ್ರವಾದ ಕೇವಲ ಒಂದು ಸೂಚನೆಯಾಗಿರುತ್ತದೆ

    Verse 52

    ನಾವು ನಿಮ್ಮ ಸಹವರ್ತಿಗಳನ್ನು ನಾಶ ಮಾಡಿರುವೆವು. ಯಾರಾದರೂ ಇದ್ದಾನೆಯೇ, ಉಪದೇಶ ಸ್ವೀಕರಿಸುವವನು

    Verse 53

    ಅವರು ಮಾಡಿದ್ದೆಲ್ಲವೂ ಗ್ರಂಥಗಳಲ್ಲಿ ದಾಖಲಾಗಿದೆ

    Verse 54

    ಸಣ್ಣ ಹಾಗೂ ದೊಡ್ಡ ಎಲ್ಲ ವಿಷಯಗಳೂ ಲಿಖಿತವಾಗಿವೆ

    Verse 55

    ಧರ್ಮನಿಷ್ಠರು ಖಂಡಿತ ಭವ್ಯ ತೋಟಗಳಲ್ಲಿ ಹಾಗೂ ನದಿಗಳಲ್ಲಿರುವರು

    Unexpected Application Error!

    Unexpected token '<', "<!DOCTYPE "... is not valid JSON

    SyntaxError: Unexpected token '<', "<!DOCTYPE "... is not valid JSON